ಬಂಟಕಲ್: ಸ್ವಾತಂತ್ರ್ಯೋತ್ಸವ ಆಚರಣೆ
ಶಿರ್ವ, ಆ.16: ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾ ಲಯದಲ್ಲಿ 71ನೆ ಸ್ವಾಂತತ್ರ್ಯ ದಿನವನ್ನು ಆಚರಿಸಲಾಯಿತು.
ವೃತ್ತ ಶಿಕ್ಷಕ ಕೃಷ್ಣಕುಮಾರ್ ರಾವ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲ ಪ್ರೊ.ಡಾ.ತಿರುಮಲೇಶ್ವರ ಭಟ್, ಸೋದೆ ಮಠ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ರಾಘವೇಂದ್ರ ತಂತ್ರಿ ಉಪಸ್ಥಿತರಿದ್ದರು. ಗಣಕಯಂತ್ರ ವಿಭಾಗದ ಶೈನಿ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. ಮೆಕ್ಯಾನಿಕಲ್ ವಿಭಾಗದ ಕಾರ್ತಿಕ್ ವಂದಿಸಿದರು.
Next Story