ರಾಜ್ಯಸಭಾ ಸದಸ್ಯತ್ವಕ್ಕೆ ಮುಕುಲ್ ರಾಯ್ ರಾಜೀನಾಮೆ
ಹೊಸದಿಲ್ಲಿ, ಅ.11: ತೃಣಮೂಲ ಕಾಂಗ್ರೆಸ್ ನ ಉಚ್ಚಾಟಿತ ನಾಯಕ ಮುಕುಲ್ ರಾಯ್ ರಾಜ್ಯಸಭೆಯ ಸದಸ್ಯತ್ವಕ್ಕೆ ಹಾಗು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
“ರಾಜ್ಯಸಭೆಯ ಸದಸ್ಯತ್ವಕ್ಕೆ ನಾನು ಇಂದು ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಟಿಎಂಸಿಯ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸುತ್ತಿದ್ದೇನೆ” ಎಂದವರು ಹೇಳಿದ್ದಾರೆ,
ರಾಜ್ಯಸಭೆಯ ನಾಯಕ ಎಂ. ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದರು.
Next Story