ಅಭ್ಯರ್ಥಿಗಳ ಆಯ್ಕೆಗೆ ಬಿಎಸ್ವೈ ಸಮಿತಿ ರಚನೆ
ಪದವೀಧರ ಹಾಗೂ ಶಿಕ್ಷಕ ಕ್ಷೇತ್ರದ ಚುನಾವಣೆ
ಬೆಂಗಳೂರು, ಅ.17: ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಐದು ಪ್ರತ್ಯೇಕ ಸಮಿತಿಗಳನ್ನು ರಚಿಸಿದ್ದಾರೆ.
ನೈರುತ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರ: ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಶಾಸಕ ಸಿ.ಟಿ.ರವಿ, ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ರುದ್ರೇಗೌಡ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೇಘರಾಜ್.
ದಕ್ಷಿಣ ಶಿಕ್ಷಕ ಕ್ಷೇತ್ರ: ಸಂಸದ ಪ್ರತಾಪ್ಸಿಂಹ, ಶಾಸಕ ವಿ.ಸೋಮಣ್ಣ, ಮಾಜಿ ಸಚಿವ ವಿ.ಶ್ರೀನಿವಾಸಪ್ರಸಾದ್, ಶಾಸಕ ಕೆ.ಜಿ.ಬೋಪಯ್ಯ.
ಈಶಾನ್ಯ ಪದವೀಧರ ಕ್ಷೇತ್ರ: ಸಂಸದ ಸಂಗಣ್ಣ ಕರಡಿ, ಶಾಸಕ ಬಿ.ಜಿ.ಪಾಟೀಲ್, ಮಾಜಿ ಶಾಸಕ ವೀರಬಸಂತ ರೆಡ್ಡಿ, ಸಂಸದ ಶ್ರೀರಾಮುಲು ಹಾಗೂ ಶಾಸಕ ದೊಡ್ಡನಗೌಡ್ರು.
ಆಗ್ನೇಯ ಶಿಕ್ಷಕ ಕ್ಷೇತ್ರ: ಸಂಸದ ಜಿ.ಎಂ.ಸಿದ್ದೇಶ್, ಚಿತ್ರದುರ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ನವೀನ್, ಮಾಜಿ ಸಂಸದ ಜಿ.ಎಸ್.ಬಸವರಾಜ, ಶಾಸಕ ಡಿ.ಎಸ್.ವೀರಯ್ಯ,
ಬೆಂಗಳೂರು ಪದವೀಧರ ಕ್ಷೇತ್ರ: ಕೇಂದ್ರ ಸಚಿವರಾದ ಎಚ್.ಎನ್. ಅನಂತಕುಮಾರ್, ಡಿ.ವಿ.ಸದಾನಂದಗೌಡ, ಶಾಸಕರಾದ ಆರ್.ಅಶೋಕ್ ಹಾಗೂ ಅರವಿಂದ ಲಿಂಬಾವಳಿಯನ್ನು ಒಳಗೊಂಡ ಸಮಿತಿಗಳನ್ನು ರಚಿಸಿ ಆದೇಶ ಹೊರಡಿಸಿದ್ದಾರೆ.