ಪಟಾಕಿ ದುರಂತ: ಬೆಂಗಳೂರಿನಲ್ಲಿ 11 ಜನರಿಗೆ ಗಾಯ
ಬೆಂಗಳೂರು, ಅ.19: ಉದ್ಯಾನನಗರಿ ಬೆಂಗಳೂರಿನಲ್ಲಿ ದೀಪಾವಳಿ ಆಚರಣೆಯ ಸಂದರ್ಭದಲ್ಲಿ ಪಟಾಕಿ ಸಿಡಿಸುವಾಗ ಸಂಭವಿಸಿದ ದುರಂತದಲ್ಲಿ ಒಟ್ಟು 11 ಜನರು ಗಾಯಗೊಂಡಿದ್ದಾರೆ.
ಗಾಯಗೊಂಡಿರುವ 8 ಮಂದಿ ನಗರದ ನಾರಾಯಣ ನೇತ್ರಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ 6 ಮಕ್ಕಳು ಸೇರಿದ್ದಾರೆ.
ಮಿಂಟೋ ಕಣ್ಣಿನ ಆಸ್ಪತ್ರೆಗೆ ಮೂರು ಮಂದಿ ಗಾಯಾಳುಗಳು ದಾಖಲಾಗಿದ್ದಾರೆ.
Next Story