ಅ. 22: ಹಿದಾಯ ಶೇರ್ ಆ್ಯಂಡ್ ಕೇರ್ ಕಾಲನಿ ಉದ್ಘಾಟನೆ
ಹಿದಾಯ ಫೌಂಡೇಶನ್
ಬಂಟ್ವಾಳ, ಅ. 19: ಮಂಗಳೂರು ಹಿದಾಯ ಫೌಂಡೇಶನ್ ಟ್ರಸ್ಟ್ನ ಹಿದಾಯ ಶೇರ್ ಆ್ಯಂಡ್ ಕೇರ್ ಕಾಲನಿಯ ಉದ್ಘಾಟನಾ ಸಮಾರಂಭವು ಅ. 22ರಂದು ಸಂಜೆ 4ಕ್ಕೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲು ಎಂಬಲ್ಲಿ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೇರ್ ಆ್ಯಂಡ್ ಕೇರ್ ಕಾಲನಿಯನ್ನು ಉದ್ಘಾಟಿಸುವರು.
ಮಂಗಳೂರು ಹಿದಾಯ ಫೌಂಡೇಶನ್ ಟ್ರಸ್ಟ್ನ ಚೇಯರ್ ಮ್ಯಾನ್ ಬಿ.ಝಕರಿಯಾ ಜೋಕಟ್ಟೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಅರಣ್ಯ ಸಚಿವ ಬಿ. ರಮಾನಾಥ ರೈ, ಆಹಾರ ಸಚಿವ ಯು.ಟಿ. ಖಾದರ್, ಜಿಲ್ಲಾ ಪಂಚಾಯತ್ ಸದಸ್ಯ ಬಿ. ಪದ್ಮಶೇಖರ ಜೈನ್ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಈ ಕೇರ್ನಲ್ಲಿ ಆಡಿಯೊ ಮತ್ತು ವೀಡಿಯೊ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆಯಿದೆ. ಅಲ್ಲದೇ, ಕಂಪ್ಯೂಟರ್ ತರಬೇತಿ, ಗ್ರಂಥಾಲಯದ ವ್ಯವಸ್ಥೆಯನ್ನೂ ಕೂಡಾ ಕಲ್ಪಿಸಲಾಗಿದೆ ಎಂದು ಮಂಗಳೂರು ಹಿದಾಯ ಫೌಂಡೇಶನ್ ಟ್ರಸ್ಟ್ನ ಪ್ರಕಟನೆ ತಿಳಿಸಿದೆ.
Next Story