ಚಾಮರಾಜನಗರ: ಅ. 21ರಂದು ಪೊಲೀಸ್ ಹುತಾತ್ಮರ ದಿನಾಚರಣೆ
ಚಾಮರಾಜನಗರ, ಅ.19: ಪೊಲೀಸ್ ಇಲಾಖೆ ವತಿಯಿಂದ ಅಕ್ಟೋಬರ್ 21ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾ ಪೊಲೀಸ್ ಕವಾಯಿತು ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಪ್ರಾದೇಶಿಕ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ವಿಜಯ್ಲಾಲ್ ಮೀನಾ ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಪೆರೆಡ್ ಕಮಾಮಡರ್ ರಿಂದ ವಂದನೆ ಸಲ್ಲಿಸುವಿಕೆ, ಮುಖ್ಯ ಅತಿಥಿಗಳಿಂದ ಹಾಗೂ ಆಹ್ವಾನಿತರಿಂದ ಹುತಾತ್ಮರಿಗೆ ಪುಷ್ಪಗುಚ್ಚ ಸಮಪ್ಣೆ, ಕಮಾಂಡರ್ರಿಂದ ವಾಲೀ ಫೈರಿಂಗ್, ಹುತಾತ್ಮರ ನಾಮ ವಾಚನ, 2 ನಿಮಿಷಗಳ ಮೌನ ಆಚರಣೆ, ಮುಖ್ಯ ಅತಿಥಿಗಳ ಭಾಷಣ ಹಾಗೂ ಇನ್ನಿತರ ಕಾರ್ಯಕ್ರಮಗಳು ನಡೆಯಲಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story