ಅ.23 ರಂದು ಅಭಿನಂದನಾ ಸಮಾರಂಭ
ಬೆಂಗಳೂರು, ಅ.20: ಐಎಎಸ್ ಅಧಿಕಾರಿಯಾಗಿ ಭಡ್ತಿ ಪಡೆದ ಕೆ.ಎ.ದಯಾನಂದ ಅವರಿಗೆ ಸಾಹಿತಿ ಮತ್ತು ಕಲಾವಿದರ ವೇದಿಕೆ ವತಿಯಿಂದ ಅ.23 ರಂದು ಅಭಿನಂದನಾ ಸಮಾರಂಭವನ್ನು ನಗರದ ರವೀಂದ್ರ ಕಲಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಮಾರಂಭದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಹಿರಿಯ ಕವಿ ಸಿದ್ದಲಿಂಗಯ್ಯ, ಪತ್ರಕರ್ತ ರವಿ ಹೆಗಡೆ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story