ಕಲಾಪದ ಆರಂಭದಲ್ಲೇ ವಿಧಾನಸಭೆಯಲ್ಲಿ ಸರಕಾರದ ವಿರುದ್ಧ ಬಿಜೆಪಿಯ ‘ಜಾರ್ಜ್’ ಅಸ್ತ್ರ
ಬೆಳಗಾವಿ, ನ.14: ಇಲ್ಲಿನ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನದ ಎರಡನೇ ದಿನವಾಗಿರುವ ಮಂಗಳವಾರ ವಿಧಾನ ಸಭೆಯ ಕಲಾಪದ ಆರಂಭವಾಗುತ್ತಿದ್ದಂತೆ ಡಿವೈಎಸ್ ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದೆ.
ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಿಷಯ ಪ್ರಸ್ತಾಪಿಸಿ ಕೆ.ಜೆ ಜಾರ್ಜ್ ವಿರುದ್ಧ ಸಿಬಿಐ ಎಫ್ ಐಆರ್ ದಾಖಲಿಸಿರುವ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಗಣಪತಿ ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ . ನಿಲುವಳಿ ಮಂಡನೆಗೆ ಅವಕಾಶ ನೀಡುವಂತೆ ಎಂದು ಶೆಟ್ಟರ್ ಪಟ್ಟು ಹಿಡಿದರು.
Next Story