ಕಟೌಟ್ಗೆ ದುಷ್ಕರ್ಮಿಗಳಿಂದ ಬೆಂಕಿ: ದೂರು
ಚಿಕ್ಕಮಗಳೂರು, ನ.21: ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷರ ಭಾವಚಿತ್ರದ ಕಟೌಟ್ಗೆ ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಕಡೂರು ಪಟ್ಟಣದಲ್ಲಿ ನಡೆದಿದೆ.
ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಸಿ.ಎಂ.ಧನಂಜಯ್ ಎಂಬವರ ಭಾವಚಿತ್ರದ ಕಟೌಟ್ಗೆ ತಡರಾತ್ರಿಯಲ್ಲಿ ಬೆಂಕಿ ಇಟ್ಟಿರುವ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಧನಂಜಯ್ ರಾಜ್ಯ ಕೈಗಾರಿಕಾ ಮತ್ತು ಅಭಿವೃದ್ಧಿ ನಿಗಮದ ಅಧ್ಯಕ್ಷ ಆಗಿದ್ದು, ಅವರ ಕಚೇರಿ ಮುಂಭಾಗದಲ್ಲಿ ಹಾಕಿದ್ದ ಕಟೌಟ್ಗೆ ಬೆಂಕಿ ಹಚ್ಚಲಾಗಿದೆ ಎನ್ನಲಾಗಿದೆ.
ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Next Story