ಜೆಡಿಎಸ್ ವಕ್ತಾರರ ನೇಮಕ
ಬೆಂಗಳೂರು, ಡಿ.8: ಜೆಡಿಎಸ್ ಪಕ್ಷದ ರಾಜ್ಯ ವಕ್ತಾರರನ್ನಾಗಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಎಂಟು ಮಂದಿಯನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ವಿಧಾನ ಪರಿಷತ್ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ, ರಮೇಶ್ ಬಾಬು, ಮಾಜಿ ಶಾಸಕರಾದ ಮರಿಲಿಂಗೇಗೌಡ, ಎಲ್.ಆರ್. ಶಿವರಾಮೇಗೌಡ, ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಝಫ್ರುಲ್ಲಾಖಾನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಲ್.ಭೋಜೇಗೌಡ, ಟಿ.ಪ್ರಭಾಕರ್, ಎಚ್.ಎಂ.ರಮೇಶ್ ಗೌಡರನ್ನು ರಾಜ್ಯ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ.
Next Story