ಡಿ.12: ಉಡುಪಿ ಮುಸ್ಲಿಮ್ ವೆಲ್ಫೇರ್ ಅಸೋಸಿಯೇಶನ್ ವತಿಯಿಂದ ರಕ್ತದಾನ ಶಿಬಿರ
ಉಡುಪಿ, ಡಿ.10: ಉಡುಪಿ ಮುಸ್ಲಿಮ್ ವೆಲ್ಫೇರ್ ಅಸೋಸಿಯೇಶನ್ ವತಿಯಿಂದ ಮಣಿಪಾಲ ಕೆಎಂಸಿ ಬ್ಲಡ್ ಬ್ಯಾಂಕಿನ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಡಿ.12ರಂದು ಬೆಳಗ್ಗೆ 10.30ಕ್ಕೆ ಉಡುಪಿ ಜಾಮೀಯ ಮಸೀದಿ ವಠಾರದಲ್ಲಿ ಆಯೋಜಿಸಲಾಗಿದೆ.
ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಐಎಂಎ ಉಡುಪಿ ಕರಾವಳಿ ಅಧ್ಯಕ್ಷ ಡಾ.ವೈ.ಸುದರ್ಶನ್ ರಾವ್, ಬ್ಲಡ್ ಬ್ಯಾಂಕಿನ ಅಸೋಸಿ ಯೇಟ್ ಪ್ರೊಫೆಸರ್ ಡಾ.ಶಮೀ ಶಾಸ್ತ್ರೀ, ಮಣಿಪಾಲ ಮಸೀದಿ ಅಧ್ಯಕ್ಷ ಹಾಜಿ ಕೆ.ಅಬ್ದುಲ್ಲಾ ಪರ್ಕಳ, ಉಡುಪಿ ಜಾಮೀಯ ಮಸೀದಿ ಅಧ್ಯಕ್ಷ ಸೈಯದ್ ಯಾಸೀನ್, ಪಿಎಫ್ಐ ಉಡುಪಿ ಕಮ್ಯುನಿಟಿ ಡೆವಲಪ್ಮೆಂಟ್ ಮುನೀರ್ ಸಾಹೇಬ್ ಕಲ್ಮಾಡಿ ಭಾಗವಹಿಸಲಿರುವರು ಎಂದು ಸಂಸ್ಥೆಯ ಅಧ್ಯಕ್ಷ ಕಲ್ಯಾಣ ಪುರ ಅಬ್ದುಲ್ ಗಫೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story