ಬ್ಯಾಂಕ್ ವಾಹನದ ಮೇಲೆ ಉಗ್ರರ ದಾಳಿ,ಇಬ್ಬರ ಸಾವು
ಶ್ರೀನಗರ,ಡಿ.11: ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕೆಲ್ಲರ್ ಪ್ರದೇಶದಲ್ಲಿ ಸೋಮವಾರ ಮಧ್ಯಾಹ್ನ ಜಮ್ಮು-ಕಾಶ್ಮೀರ ಬ್ಯಾಂಕಿಗೆ ಸೇರಿದ ವಾಹನವೊಂದರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಬ್ಯಾಂಕಿನ ಇಬ್ಬರು ಕಾವಲುಗಾರರು ಕೊಲ್ಲಲ್ಪಟ್ಟಿದ್ದಾರೆ. ದುಷ್ಕರ್ಮಿಗಳ ಪತ್ತೆಗಾಗಿ ಭದ್ರತಾ ಪಡೆಗಳು ವ್ಯಾಪಕ ಶೋಧ ಕಾರ್ಯಾಚರಣೆ ನಡೆಸುತ್ತಿವೆ.
ಗಂಭೀರ ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದರು.
Next Story