ಸಿಎಂ ಗೆ ವಿವೇಚನೆಯ ಕೊರತೆ ಇದೆ: ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಕಿಡಿ
ಮೈಸೂರು,ಜ.13: ಬಿಜೆಪಿ, ಆರ್ ಎಸ್ ಎಸ್ ಉಗ್ರಗಾಮಿಗಳು ಎಂದು ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ ವಿರುದ್ದ ಮಾಜಿ ಸಚಿವ ವಿ.ಶ್ರೀನಿವಾಸ್ಪ್ರಸಾದ್ ಕಿಡಿಕಾರಿದರು.
ಮೈಸೂರಿನಲ್ಲಿ ಶನಿವಾರ ಮಾಧ್ಯಮದಗಳೊಂದಿಗೆ ಮಾತನಾಡಿದ ಅವರು, ಒಬ್ಬ ಉನ್ನತ ಹುದ್ದೆಯಲ್ಲಿರುವ ವ್ಯಕ್ತಿ ಈ ರೀತಿಯ ಹೇಳಿಕೆ ನೀಡಬಾರದು. ಇದರ ಅರಿವು ಕೂಡ ಅವರಿಗೆ ಇಲ್ಲ. ಆ ಆಮನುಷ್ಯನಿಗೆ ವಿವೇಚನೆಯ ಕೊರತೆ ಇದೆ ಹಾಗಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದರು.
ಉನ್ನತ ಹುದ್ದೆಯಲ್ಲಿರುವವರು ಈ ರೀತಿ ಹೇಳಿಕೆ ನೀಡಬಾರದು. ಸಿಎಂ ಆಗಿ ಈ ರೀತಿ ಪ್ರಚೋದನಾಕಾರಿ ಹೇಳಿಕೆ ನೀಡೋದು ತಪ್ಪು. ಸಿಎಂ ಮಾತಿನಲ್ಲೇ ಅಹಂ ಇದೆ ಎಂದು ಹರಿಹಾಯ್ದರು.
ಉಪಚುನಾವಣೆಯಲ್ಲಿ ನನ್ನ ವಿರುದ್ದ ಚಕ್ರವ್ಯೂಹ ರಚಿಸಿ ಸೋಲಿಸಿದ್ದಾರೆ. ಮುಂಬರುವ ಚುನಾವಣೆಲ್ಲಿ ಇವರ ಬಣ್ಣ ಬಯಲು ಮಾಡುತ್ತೇನೆ ಎಂದು ಹೇಳಿದರು.
Next Story