ಪೋಲಿಸರ ಬಂದೂಕು ಕಸಿದು ಪರಾರಿ
ಬೆಂಗಳೂರು,ಜ.18: ಇಬ್ಬರು ಪೇದೆಗಳ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು ಬಂದೂಕು ಕಸಿದುಕೊಂಡು ಪರಾರಿಯಾಗಿರುವ ಘಟನೆ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವಾಪ್ತಿಯಲ್ಲಿ ನಡೆದಿದೆ.
ಟಾಟ ನಗರದಲ್ಲಿ ಕೊಡಿಗೇಹಳ್ಳಿ ಠಾಣೆಯ ಪೊಲೀಸ್ ಪೇದೆಗಳಾದ ಪರಮೇಶ್, ಸಿದ್ದಪ್ಪಎಂಬುವರ ಮೇಲೆ ಹಲ್ಲೆ ನಡೆಸಿ ದುಷ್ಕರ್ಮಿಗಳು ಬಂದೂಕು ದೋಚಿ ಪರಾರಿಯಾಗಿದ್ದಾರೆ.
ದುಷ್ಕರ್ಮಿಗಳು ಡ್ರಾಗರ್, ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿದ್ದು, ಪೇದೆಗಳಾದ ಪರಮೇಶ್, ಸಿದ್ದಪ್ಪಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದು ಬಂದಿದೆ.
ಕಳ್ಳತನಕ್ಕೆ ಬಂದಿದ್ದ ದುಷ್ಕರ್ಮಿಗಳು ಪೊಲೀಸರು ಬಂದಿದ್ದನ್ನು ನೋಡಿದ ದುಷ್ಕರ್ಮಿಗಳು ಕಲ್ಲು ತೂರಿ ರಸ್ತೆ ಬದಿ ಅಡಗಿಕೊಂಡಿದ್ದಾರೆ. ಪೇದೆಗಳು ಅವರ ಬಳಿ ಹೋದಾಗ ಡ್ರಾಗರ್ ಹಾಗೂ ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿ, ಬಂದೂಕು ಕಸಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ಸಂಬಂಧ ಕೊಡಿಗೇಹಳ್ಳಿ ಪೊಲೀಸರು ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಬಂಧಿಸಲಾಗುವುದೆಂದು ಪೋಲಿಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.