ದಕ್ಷಿಣ ಕನ್ನಡ ಜಿಪಂ ಸಿಇಒಗೆ ವಿವರಣೆ ನೀಡಲು ಹೈಕೋರ್ಟ್ ಆದೇಶ
ಭುವನಜ್ಯೋತಿ ಎಜುಕೇಷನ್ ಟ್ರಸ್ಟ್ಗೆ ಆಸ್ತಿ ತೆರಿಗೆ ಪಾವತಿಸಲು ಸೂಚಿಸಿರುವ ವಿಚಾರ
ಬೆಂಗಳೂರು, ಜ.18: ದಕ್ಷಿಣ ಕನ್ನಡ ಜಿಲ್ಲೆಯ ಭುವನಜ್ಯೋತಿ ಚಾರಿಟೇಬಲ್ ಟ್ರಸ್ಟ್ ನಡೆಸುತ್ತಿರುವ ಭುವನಜ್ಯೋತಿ ಎಜುಕೇಷನ್ ಟ್ರಸ್ಟ್ಗೆ ಆಸ್ತಿ ತೆರಿಗೆ ಪಾವತಿಸುವಂತೆ ಸೂಚಿಸಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಭುವನಜ್ಯೋತಿ ಎಜುಕೇಷನ್ ಟ್ರಸ್ಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿನೀತ್ ಕೊಠಾರಿ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು.
ಅಲ್ಲದೆ, ಪ್ರತಿವಾದಿಗಳಾದ ಶಿರ್ತಾಡಿ ಗ್ರಾಮ ಪಂಚಾಯತ್ ನ ಪಿಡಿಒ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಹಾಗೂ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿದ ನ್ಯಾಯಪೀಠ, ಯಾವ ಕಾರಣಕ್ಕೆ ತೆರಿಗೆ ವಿನಾಯಿತಿ ನೀಡಲು ನಿರಾಕರಿಸಲಾಗಿದೆ ಎಂಬುದರ ಕುರಿತು ವಿವರಣೆ ನೀಡಿ ಪ್ರಮಾಣ ಪತ್ರ ಸಲ್ಲಿಸುವಂತೆ ಜಿಪಂ ಸಿಇಒಗೆ ನಿರ್ದೇಶಿಸಿದೆ.
Next Story