ಸುಬ್ರಹ್ಮಣ್ಯ ಕಾಮತ್
ಉಡುಪಿ, ಜ.23: ಪರ್ಕಳ ದೇವಿನಗರದ ನಿವಾಸಿ ಸುಬ್ರಹ್ಮಣ್ಯ ಕಾಮತ್ ಎಸ್. ಇವರು ಇತ್ತೀಚೆಗೆ ಮಣಿಪಾಲ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 65 ವರ್ಷ ಪ್ರಾಯವಾಗಿತ್ತು.
ಕಾಮತ್ ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಮೂಲತ: ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ಸುರುಳಿ ಗ್ರಾಮದವರಾದ ಇವರು ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ, ಹೆಬ್ರಿ, ಹಿರಿಯಡ್ಕ, ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದರು. ಅಲ್ಲದೇ ಉಡುಪಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಅಧೀಕ್ಷಕರು ಹಾಗೂ ಪತ್ರಾಂಕಿತ ವ್ಯವಸ್ಥಾಪಕ ರಾಗಿ ಒಟ್ಟು 36 ವರ್ಷಗಳ ಸುಧೀಘರ್ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.
Next Story