ತಲಪಾಡಿ: ತಂಡದಿಂದ ವಿದ್ಯಾರ್ಥಿಗಳಿಗೆ ಹಲ್ಲೆ
ಗಾಯಗೊಂಡ ಇಬ್ಬರು ಆಸ್ಪತ್ರೆಗೆ ದಾಖಲು
ಮಂಗಳೂರು, ಫೆ. 17: ತಲಪಾಡಿ ಜಂಕ್ಷನ್ ಬಸ್ಸು ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳ ಮೇಲೆ ತಂಡವೊಂದು ಹಲ್ಲೆ ನಡೆಸಿದ್ದು, ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶನಿವಾರ ನಡೆದಿದೆ.
ಹಲ್ಲೆಗೊಳಗಾದ ವಿದ್ಯಾರ್ಥಿಗಳನ್ನು ಇಮ್ರಾನ್, ಫೈರೋಝ್ ಮತ್ತು ಸಾರಿಕ್ ಎಂದು ಗುರುತಿಸಲಾಗಿದೆ. ಆ ಪೈಕಿ ಇಬ್ಬರು ವಿದ್ಯಾರ್ಥಿಗಳು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವರು ನಗರದ ಕಾಲೇಜೊಂದರ ವಿದ್ಯಾರ್ಥಿಗಳಾಗಿದ್ದಾರೆ. ಶನಿವಾರ ಕಾಲೇಜಿಗೆ ಹೋಗಲೆಂದು ತಲಪಾಡಿ ಜಂಕ್ಷನ್ನಲ್ಲಿ ಬಸ್ಸಿಗಾಗಿ ಕಾಯುತ್ತಿದ್ದಾಗ ತಂಡವೊಂದು ಇವರ ಮೇಲೆ ಹಲ್ಲೆ ನಡೆಸಿದೆ. ಶುಕ್ರವಾರ ಸಂಜೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಸೀಟು ಬಿಟ್ಟು ಕೊಡುವ ವಿಚಾರದಲ್ಲಿ ಉಂಟಾಗಿದ್ದ ವಾಗ್ವಾದದ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story