ಫೆ.18: ಆದಿಉಡುಪಿ ಜಿಲ್ಲಾ ಅಂಬೇಡ್ಕರ್ ಭವನದಲ್ಲಿ ಸಮಾಲೋಚನಾ ಸಭೆ
ಉಡುಪಿ, ಫೆ.17: ಉಡುಪಿ ಜಿಲ್ಲಾ ಮೀಸಲಾತಿ ಸಂರಕ್ಷಣಾ ಸಮಿತಿ ವತಿಯಿಂದ ‘ಭಡ್ತಿಯಲ್ಲಿ ಮೀಸಲಾತಿ’ ಕುರಿತ ಜಿಲ್ಲಾ ಮಟ್ಟದ ಸಮಾವೇಶ ನಡೆಸುವ ಬಗ್ಗೆ ಸಮಾಲೋಚನಾ ಸಭೆಯನ್ನು ಫೆ.18ರಂದು ಬೆಳಗ್ಗೆ 10 ಗಂಟೆಗೆ ಆದಿಉಡುಪಿ ಜಿಲ್ಲಾ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.
ಸಭೆಯಲ್ಲಿ ರಾಜ್ಯ ಹಾಗೂ ಕೇಂದ್ರ ಸರಕಾರದ ವಿವಿಧ ಇಲಾಖೆಗಳಲ್ಲಿ ಮತ್ತು ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಉದ್ಯೋಗದಲ್ಲಿರುವ ಎಸ್.ಸಿ/ಎಸ್.ಟಿ. ನೌಕರರು ಹಾಗೂ ವಿವಿಧ ಇಲಾಖೆಗಳಲ್ಲಿನ ಎಸ್.ಸಿ/ಎಸ್.ಟಿ. ನೌಕರರ ಸಂಘದ ಪದಾಧಿ ಕಾರಿಗಳು ಭಾಗವಹಿಸುವಂತೆ ಸಮಿತಿಯ ಅಧ್ಯಕ್ಷ ಎಚ್.ಪರಮೇಶ್ವರ ಬನ್ನಂಜೆ, ಪ್ರಧಾನ ಕಾರ್ಯದರ್ಶಿ ಅಜಯ ಕುಮಾರ್, ಕಾನೂನು ಸಲಹೆಗಾರ ಮಂಜುನಾಥ ವಿ. ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.
Next Story