ಕಾಂಗ್ರೆಸ್ ಮುಖಂಡ ನಾರಾಯಣ ಸ್ವಾಮಿ ಶರಣಾಗತಿ
ಬೆಂಗಳೂರು, ಫೆ.23: ಬಿಬಿಎಂಪಿ ಕಚೇರಿಗೆ ಪೆಟ್ರೋಲ್ ಎರಚಿದ ಪ್ರಕರಣದ ಆರೋಪಿ ಕಾಂಗ್ರೆಸ್ ಮುಖಂಡ ನಾರಾಯಣ ಸ್ವಾಮಿ ಎಂಬವರು ರಾಮಮೂರ್ತಿ ನಗರ ಪೊಲೀಸರಿಗೆ ಶರಣಾಗಿದ್ದಾರೆ.
ನಾರಾಯಣ ಸ್ವಾಮಿ ಫೆ.16ರಂದು ಬಿಬಿಎಂಪಿ ಹೊರಮಾವು ಕಚೇರಿಗೆ ನುಗ್ಗಿ ಬಾಟ್ಲಿಯಲ್ಲಿ ತುಂಬಿಕೊಂಡಿದ್ದ ಪೆಟ್ರೋಲ್ ನ್ನು ಎರಚಿ ಕಚೇರಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿರುವುದಾಗಿ ಪೊಲೀಸರಿಗೆ ದೂರು ನೀಡಲಾಗಿತ್ತು. ಅಕ್ರಮವಾಗಿ ಖಾತೆ ಬದಲಾವಣೆ ಮಾಡಿಕೊಡಲಿಲ್ಲ ಎಂಬ ಸಿಟ್ಟಿನಿಂದ ಅಧಿಕಾರಿಗಳೊಂದಿಗೆ ದರ್ಪ ತೋರಿದ್ದ ನಾರಾಯಣ ಸ್ವಾಮಿ ವಿರುದ್ಧ ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪವಾಗಿ ವಿಪಕ್ಷಗಳು ಇವರ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿತ್ತು.
ಮುಖ್ಯ ಮಂತ್ರಿ ಮತ್ತು ಗೃಹ ಸಚಿವರ ನಿರ್ದೇಶನದ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಬೆನ್ನಲ್ಲೇ ನಾರಾಯಣ ಸ್ವಾಮಿ ತಲೆಮರೆಸಿಕೊಂಡಿರುವುದಾಗಿ ಹೇಳಲಾಗಿತ್ತು.
Next Story