ಶಿಷ್ಟಾಚಾರ ಉಲ್ಲಂಘನೆ: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ನೋಟಿಸ್ ಜಾರಿ
ಬೆಂಗಳೂರು, ಫೆ. 25: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಆಗಮನದ ವೇಳೆ ಶಿಷ್ಟಾಚಾರ ಉಲ್ಲಂಘಿಸಿದ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ರಾಜ್ಯ ಸರಕಾರ ನೋಟಿಸ್ ಜಾರಿ ಮಾಡಿದೆ.
ಹಾಸನ ಜಿಲ್ಲೆ ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ ಬಾಹುಬಲಿ ಮಹಾ ಮಸ್ತಕಾಭಿಷೇಕಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದ ಸಂದರ್ಭ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ. ಖುದ್ದು ಹಾಜರಿದ್ದು ಸ್ವಾಗತಿಸದೆ, ಶಿಷ್ಟಾಚಾರ ಪಾಲಿಸಲಿಲ್ಲ ಎಂಬ ಆರೋಪದ ಹಿನ್ನೆಲೆ ನೋಟಿಸ್ ಜಾರಿ ಮಾಡಲಾಗಿದೆ.
ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭ ಸೂಚನೆ ಹಿನ್ನೆಲೆ ಸರಕಾರದ ಅಪರ ಕಾರ್ಯದರ್ಶಿ ಪಿ.ರವಿಕುಮಾರ್ ನೋಟಿಸ್ ಜಾರಿಗೊಳಿಸಿದ್ದಾರೆ. ಅನುಪಸ್ಥಿತಿಗೆ ಸೂಕ್ತ ಕಾರಣ ನೀಡಿ ಮೂರು ದಿನದ ಒಳಗೆ ಉತ್ತರಿಸುವಂತೆ ರೋಹಿಣಿ ಸಿಂಧೂರಿಗೆ ನಿರ್ದೇಶಿಸಿದ್ದು, ಇಲ್ಲವಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಲಾಗಿದೆ.
Next Story