ರಸ್ತೆ ಅಪಘಾತ: ಯುವತಿಗೆ ಗಾಯ
ಕಡಬ, ಫೆ.25: ಸ್ಕೂಟರ್ ಗೆ ಕಾರು ಢಿಕ್ಕಿ ಹೊಡೆದು ಸ್ಕೂಟರ್ ನಲ್ಲಿದ್ದ ಯುವತಿ ಗಾಯಗೊಂಡ ಘಟನೆ ಉಪ್ಪಿನಂಗಡಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿತ್ತಡಿ ಎಂಬಲ್ಲಿ ರವಿವಾರ ನಡೆದಿದೆ.
ಗಾಯಾಳುವನ್ನು ಮಂಗಳೂರಿನ ಚಾನೆಲೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೊಯಿಲ ಗ್ರಾಮದ ಏಣಿತ್ತಡ್ಕ ನಿವಾಸಿ ಸೌಮ್ಯ ಎಂದು ಗುರುತಿಸಲಾಗಿದೆ. ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರು ಗೋಳಿತ್ತಡಿ ಜಂಕ್ಷನ್ ನಲ್ಲಿ ಸ್ಕೂಟರ್ ಗೆ ಢಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಗಾಯಾಳುವನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story