ಚಂಡಮಾರುತ: ಕೇರಳದಲ್ಲಿ ಕಟ್ಟೆಚ್ಚರ
ಸಾಂದರ್ಭಿಕ ಚಿತ್ರ
ತಿರುವನಂತಪುರ, ಮಾ. 13: ದಕ್ಷಿಣ ಕನ್ಯಾಕುಮಾರಿಯಲ್ಲಿ ನಿಮ್ನ ವಾಯು ಭಾರ ಕುಸಿತ ತೀವ್ರಗೊಂಡಿರುವುದರಿಂದ ಮುಂದಿನ ಎರಡು ದಿನಗಳ ಕಾಲ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಮುಖ್ಯವಾಗಿ ದಕ್ಷಿಣ ಕೇರಳದ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಮಂಗಳವಾರ ಬೆಳಗ್ಗೆ 8.30ರ ಸುಮಾರಿಗೆ ನಿಮ್ನ ವಾಯು ಭಾರ ಕುಸಿತ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯಾದ್ಯಂತದ ಮೀನುಗಾರರಿಗೆ ರಾಜ್ಯ ವಿಕೋಪ ನಿರ್ವಹಣಾ ಸಮಿತಿ ಹಾಗೂ ರಾಜ್ಯ ಸರಕಾರ ಮುನ್ನೆಚ್ಚರಿಕೆ ನೀಡಿದೆ. ಮುಂದಿನ 48 ಗಂಟೆಗಳಲ್ಲಿ ಸಮುದ್ರದ ಅಲೆಗಳು 3 ಮೀಟರ್ ಎತ್ತರ ಹಾಗೂ ಗಾಳಿ ಯಾವುದೇ ಕಡೆಯಲ್ಲಿ ಗಂಟೆಗೆ 40-60 ಕಿ.ಮೀ. ವೇಗದಲ್ಲಿ ಬೀಸಲಿದೆ. ಆದುದರಿಂದ ಮೀನುಗಾರರು ಮುನ್ನೆಚ್ಚರಿಕೆ ವಹಿಸುವಂತೆ ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಸುರಕ್ಷಿತವೆಂದು ಘೋಷಿಸುವವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕ್ರಮಕೈಗೊಳ್ಳಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರಾಜ್ಯಾಡಳಿತಕ್ಕೆ ಆದೇಶ ನೀಡಿದ್ದಾರೆ. ಮೀನುಗಾರರ ರಕ್ಷಣೆಗೆ ತಟ ರಕ್ಷಣಾ ಪಡೆಯ ನೆರವನ್ನೂ ಅವರು ಕೋರಿದ್ದಾರೆ.