ದಾವಣಗೆರೆ ದೂಡಾ ಜಂಟಿ ನಿರ್ದೇಶಕರ ಮನೆ, ಕಚೇರಿಗೆ ಎಸಿಬಿ ದಾಳಿ
ದಾವಣಗೆರೆ, ಮಾ.20: ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರ(ದೂಡಾ)ದ ಜಂಟಿ ನಿರ್ದೇಶಕರ ಮನೆ ಹಾಗೂ ಕಚೇರಿ ಮೇಲೆ ಇಂದು ಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಏಕಕಾಲದಲ್ಲಿ ದಾಳಿ ನಡೆಸಿದೆ.
ದೂಡಾ ಜಂಟಿ ನಿರ್ದೇಶಕ ಗೋಪಾಲಕೃಷ್ಣ ಅವರ ದಾವಣಗೆರೆ ನಿಟ್ಟುವಳ್ಳಿ ಸಿದ್ದರಾಮೇಶ್ವರ ಬಡಾವಣೆಯಲ್ಲಿರುವ ಮನೆ, ದೂಡಾ ಕಚೇರಿ, ದಾವಣಗೆರೆ ಮಹಾನಗರ ಪಾಲಿಕೆಯ ಕಚೇರಿ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಗೋಪಾಲಕೃಷ್ಣ ಅವರು ಸಿದ್ದರಾಮೇಶ್ವರ ಬಡಾವಣೆಯಲ್ಲಿ ಮೂರು ಹಂತಸ್ತಿನ ಮನೆ ಸೇರಿದಂತೆ ಕಚೇರಿಯ ಮೇಲೆ ದಾವಣಗೆರೆ ಎಸಿಬಿ ಎಸ್ಪಿ ವಂಶೀಕೃಷ್ಣ, ದಾವಣಗೆರೆ ವಾಸುದೇವ ರಾಮ್, ಮಂಜುನಾಥ ಪಂಡಿತ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
Next Story