ಮಂಗಳೂರು : ಸರ್ಕ್ಯೂಟ್ ಹೌಸ್ ನಲ್ಲಿ ಬ್ಲಾಕ್ ಸಮಿತಿ ಅಧ್ಯಕ್ಷರೊಂದಿಗೆ ರಾಹುಲ್ ಸಮಾಲೋಚನೆ
ಮಂಗಳೂರು,ಮಾ.21: ಉಡುಪಿ ಹಾಗೂ ದ.ಕ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಂಗಿರುವ ಸರ್ಕ್ಯೂಟ್ ಹೌಸ್ ನಲ್ಲಿ ಬುಧವಾರ ಬ್ಲಾಕ್ ಸಮಿತಿ ಅಧ್ಯಕ್ಷರೊಂದಿಗೆ ರಾಹುಲ್ ಸಮಾಲೋಚನೆ ಆರಂಭಗೊಂಡಿದೆ.
ದ.ಕ ಮತ್ತು ಉಡುಪಿ ಜಿಲ್ಲೆಗಳ ವಿವಿಧ ಬ್ಲಾಕ್ ಗಳ ಅಧ್ಯಕ್ಷರುಗಳು ಸರ್ಕ್ಯೂಟ್ ಹೌಸ್ ಗೆ ಆಗಮಿಸಿದ್ದಾರೆ.
ರಾಹುಲ್ ಗಾಂಧಿ ತಂಗಿರುವ ಸರ್ಕ್ಯೂಟ್ ಹೌಸ್ ಗೆ ಬಿಗಿ ಭದ್ರತೆ ಕಲ್ಪಿಸಿರುವುದರಿಂದ ಭದ್ರತಾ ಸಿಬ್ಬಂದಿಗಳು ಸರ್ಕ್ಯೂಟ್ ಹೌಸ್ ಪ್ರವೇಶಿಸುವ ಪ್ರತಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾರೆ.
ಈ ಸಂದರ್ಭ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ವೇಣುಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು.
ಸಭೆಯಲ್ಲಿ ದ.ಕ ಜಿಲ್ಲೆ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಕೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ಧನ ತೋನ್ತೆ ಭಾಗವಹಿಸಿದ್ದಾರೆ.
ಉಡುಪಿ ಜಿಲ್ಲೆಯಿಂದ 10 ಬ್ಲಾಕ್ ಸಮಿತಿ ಅಧ್ಯಕ್ಷರುಗಳು ಮತ್ತು ದ.ಕ ಜಿಲ್ಲೆಯಿಂದ 16 ಬ್ಲಾಕ್ ಸಮಿತಿ ಅಧ್ಯಕ್ಷರುಗಳ ಸಹಿತ ಕೆಪಿಸಿಸಿ ಸದಸ್ಯರು ಭಾಗವಹಿಸಿದ್ದಾರೆ.
ಸಭೆಯ ಬಳಿಕ ರಾಹುಲ್ ಗಾಂಧಿ ಚಿಕ್ಕಮಗಳೂರಿಗೆ ತೆರಳಲಿದ್ದಾರೆ.