ಜಮ್ಮು: ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಯೋಧ ಹುತಾತ್ಮ
ಜಮ್ಮು,ಎ.21: ಗಡಿ ನಿಯಂತ್ರಣಾ ರೇಖೆಯ ಸಮೀಪದಲ್ಲಿರುವ ಜಮ್ಮು ಮತ್ತು ಕಾಶ್ಮೀರದ ರಾಜೋರಿಯಲ್ಲಿ ಪಾಕಿಸ್ತಾನದ ಯೋಧರು ಕದನ ವಿರಾಮ ಉಲ್ಲಂಘಿಸಿ ನಡೆಸಿದ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಭಾರತದ ಯೋಧ ಹವಾಲ್ದಾರ್ ಚರಣ್ ಜಿತ್ ಸಿಂಗ್ (42) ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ.
ಚರಣ್ ಜಿತ್ ಸಿಂಗ್ ಎ.17ರಂದು ಕರ್ತವ್ಯದಲ್ಲಿದ್ದಾಗ ಪಾಕ್ ಯೋಧರು ನಡೆಸಿದ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದರು. ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದರೊಂದಿಗೆ ಪಾಕ್ ಕದನ ವಿರಾಮ ಉಲ್ಲಂಘಿಸಿ ನಡೆಸಿದ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 31ಕ್ಕೇರಿದೆ. ಇದರಲ್ಲಿ 16 ಮಂದಿ ಭಾರತದ ಯೋಧರು ಸೇರಿದ್ದಾರೆ.
Next Story