ಕಾಸರಗೋಡು: ಲಾರಿ ಢಿಕ್ಕಿ; ಸ್ಕೂಟರ್ ಸವಾರೆ ಸ್ಥಳದಲ್ಲೇ ಮೃತ್ಯು
ಕಾಸರಗೋಡು, ಎ. 21: ಮರಳು ಲಾರಿಯೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶನಿವಾರ ಬೆಳಗ್ಗೆ ಮುಳ್ಳೇರಿಯ ಬಳಿ ನಡೆದಿದೆ.
ಮುಳ್ಳೇರಿಯ ಅಡ್ಕ ನಿವಾಸಿ ಬಿಂದು (44) ಮೃತರು ಎಂದು ಗುರುತಿಸಲಾಗಿದೆ. ಅವರು ಮುಳ್ಳೇರಿಯ ಪೇಟೆಯಲ್ಲಿ ಟೈಲರಿಂಗ್ ಶಾಪ್ ನಡೆಸುತ್ತಿದ್ದರು.
ಇಂದು ಬೆಳಗ್ಗೆ ಟೈಲರಿಂಗ್ ಶಾಪ್ ಗೆ ತನ್ನ ಸ್ಕೂಟರ್ ನಲ್ಲಿ ತೆರಳುತ್ತಿದ್ದ ಸಂದರ್ಭ ಮರಳು ಹೇರಿಕೊಂಡು ಅತೀ ವೇಗದಿಂದ ಹೋಗುತ್ತಿದ್ದ ಲಾರಿ ಸ್ಕೂಟರ್ ಗೆ ಢಿಕ್ಕಿ ಹೊಡೆದಿದ್ದು, ರಸ್ತೆಗೆಸೆಯಲ್ಪಟ್ಟ ಬಿಂದು ಅವರ ತಲೆಯ ಮೇಲೆ ಲಾರಿಯ ಚಕ್ರ ಹರಿದಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ.
ಆದೂರು ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಮಹಜರು ನಡೆಸಿದ್ದಾರೆ.
Next Story