ಬಾದಾಮಿಯಿಂದ ಸಿಎಂ ಸ್ಪರ್ಧೆ ಬಗ್ಗೆ ಸುಳಿವು ನೀಡಿದ ವೇಣುಗೋಪಾಲ್
ಬೆಂಗಳೂರು, ಎ.21: ಬಾದಾಮಿ ಕ್ಷೇತ್ರದಿಂದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಬಗ್ಗೆ ಏನನ್ನು ಹೇಳಿಲ್ಲ. ಆದರೆ ಕೆಪಿಸಿಸಿ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸುಳಿವು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಿಎಂ ಮೇಲೆ ಒತ್ತಡ ಇದೆ. ಉತ್ತರ ಕರ್ನಾಟಕದ ಜನತೆ ಸಿಎಂ ಬಾದಾಮಿಯಿಂದ ಸ್ಪರ್ಧಿಸುವುದನ್ನು ಬಯಸಿದ್ದಾರೆ ಎಂದರು.
ಸಿಎಂ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಬಾದಾಮಿಯಿಂದ ಸ್ಪರ್ಧೆ ಬೇಡ ಅಂದ್ಕೊಂಡಿದ್ದೀನಿ
ಬಾದಾಮಿ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸುವುದು ಬೇಡ ಅಂದ್ಕೊಂಡಿದ್ದೀನಿ. ಆದರೆ ಈ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದರು.
ಈಗಾಗಲೇ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದೇನೆ. ನಾನು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವುದು ಅಲ್ಲಿನ ಜನತೆಗೆ ಸಂತಸವಾಗಿದೆ.
ತಾನು ಸ್ಪರ್ಧಿಸುವಂತೆ ಹೈಕಮಾಂಡ್ ಮೇಲೆ ಉತ್ತರ ಕರ್ನಾಟಕದ ಜನತೆ ಒತ್ತಡ ಹೇರಿದ್ದಾರೆ. ಹೈಕಮಾಂಡ್ ಸೂಚಿಸಿದರೆ ಬಾದಾಮಿಯಿಂದ ಸ್ಪರ್ಧಿಸಲು ಸಿದ್ದ ಎಂದು ಸಿಎಂ ತಿಳಿಸಿದರು.