ಮಂಗಳೂರಿನಲ್ಲಿ ಡಾ.ರಾಜ್ಕುಮಾರ್ ಜಯಂತಿ ಆಚರಣೆ
ಮಂಗಳೂರು, ಎ.24: ರಂಗಭೂಮಿ, ಸಿನೆಮಾ ಕ್ಷೇತ್ರದ ಮೇರು ನಟರಾಗಿ ಗುರುತಿಸಿಕೊಂಡಿದ್ದ ಡಾ.ರಾಜ್ಕುಮಾರ್ ಹಿನ್ನೆಲೆ ಗಾಯಕರಾಗಿಯೂ ಪ್ರಸಿದ್ಧಿ ಪಡೆದವರು. ಅವರು ಅದ್ಭುತ ಸಾಧಕರಾಗಿದ್ದರೂ, ಸರಳ ಸಜ್ಜನಿಕೆಯ ವ್ಯಕ್ತಿತ್ವವನ್ನು ಹೊಂದಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಅಭಿಪ್ರಾಯಿಸಿದ್ದಾರೆ.
ನಗರದ ವಾರ್ತಾ ಮತ್ತು ಪ್ರಚಾರ ಇಲಾಖೆ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಸರಳ ರೀತಿಯಲ್ಲಿ ಆಚರಿಸಲಾದ ಡಾ.ರಾಜ್ಕುಮಾರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ್, ಆರೋಗ್ಯ ಇಲಾಖೆಯ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಉಪಸ್ಥಿತರಿದ್ದರು. ವಾರ್ತಾಧಿಕಾರಿ ಖಾದರ್ ಶಾ ಸ್ವಾಗತಿಸಿ, ವಂದಿಸಿದರು.
Next Story