ವರುಣಾದಲ್ಲಿ ಬಿಜೆಪಿ ಅಭ್ಯರ್ಥಿ ಗೊಂದಲಕ್ಕೆ ತೆರೆ: ಕುತೂಹಲ ಕೆರಳಿಸಿದ್ದ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ ಇವರು…
ಮೈಸೂರು, ಎ.24: ತೀವ್ರ ಕುತೂಹಲ ಕೆರಳಿಸಿದ್ದ ವರುಣಾದ ಬಿಜೆಪಿ ಅಭ್ಯರ್ಥಿ ಹೆಸರು ಕೊನೆಗೂ ಬಹಿರಂಗಗೊಂಡಿದೆ. ಈ ಮೊದಲು ಬಿಎಸ್ ವೈ ಪುತ್ರ ವಿಜಯೇಂದ್ರ ಇಲ್ಲಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗಿತ್ತು.
ಆದರೆ ನಿನ್ನೆ ನಡೆದ ಸಮಾವೇಶದಲ್ಲಿ ವಿಜಯೇಂದ್ರ ವರುಣಾದಿಂದ ಸ್ಪರ್ಧಿಸುವುದಿಲ್ಲ ಎಂದು ಯಡಿಯೂರಪ್ಪ ಹೇಳಿಕೆ ನೀಡಿದ್ದರು. ಇದೀಗ ಬಿಜೆಪಿ ಅಭ್ಯರ್ಥಿಯಾಗಿ ವರುಣಾದಿಂದ ಬಸವರಾಜು ಟಿ. ಕಣಕ್ಕಿಳಿಯಲಿದ್ದಾರೆ ಎನ್ನುವುದು ಖಚಿತಗೊಂಡಿದೆ.
ವರುಣಾದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜು ಹೆಸರು ಖಚಿತಗೊಳ್ಳುತ್ತಿದ್ದಂತೆ, ಇತ್ತ ಲಿಂಗಾಯತ ಮುಖಂಡರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
Next Story