ಎ.27 ರಂದು ರಾಜ್ಕುಮಾರ್ ಸಂಸ್ಕೃತಿ ದತ್ತಿ ಪ್ರಶಸ್ತಿ ಪ್ರದಾನ
ಬೆಂಗಳೂರು, ಎ.25: ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನೀಡುವ ನಟ ರಾಜ್ಕುಮಾರ್ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ಆರ್.ಪರಮಶಿವನ್ ಆಯ್ಕೆಯಾಗಿದ್ದು, ಎ.27 ರಂದು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಪ್ರಶಸ್ತಿಯನ್ನು ನಗರದ ಚಾಮರಾಜಪೇಟೆಯಲ್ಲಿರುವ ಕಸಾಪದ ಶತಮಾನೋತ್ಸವ ಭವನದಲ್ಲಿ ಸಂಜೆ 5.30 ಕ್ಕೆ ಪ್ರದಾನ ಮಾಡಲಿದ್ದು, ಕಾರ್ಯಕ್ರಮದಲ್ಲಿ ನಿರ್ದೇಶಕ ಹಾಗೂ ಸಾಹಿತಿ ಡಾ.ನಾಗತಿಹಳ್ಳಿ ಚಂದ್ರಶೇಖರ್, ಕಸಾಪ ಅಧ್ಯಕ್ಷ ಡಾ.ಮನುಬಳಿಗಾರ್, ಚಿತ್ರ ನಿರ್ಮಾಪಕ ಎಸ್.ಎ.ಚಿನ್ನೇಗೌಡ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story