ಬೆಂಗಳೂರು: ಮಹಿಳೆಯ ಕೊಲೆ; ಪತಿ ಬಂಧನ
ಬೆಂಗಳೂರು, ಎ.24: ಮನೆಯೊಂದರಲ್ಲಿ ಗೃಹಣಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಆರೋಪ ಪ್ರಕರಣ ಸಂಬಂಧ ಪತಿಯನ್ನು ಇಲ್ಲಿನ ಸಿಕೆ ಅಚ್ಚುಕಟ್ಟು ಠಾಣೆ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.
ಮೂಲತಃ ಚಿತ್ತೂರು ನಿವಾಸಿಯಾದ ವಾಣಿಶ್ರೀ(26) ಕೊಲೆಯಾದ ಮಹಿಳೆಯಾಗಿದ್ದು, ಈಕೆಯ ಪತಿ ಗಜೇಂದ್ರನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
6 ವರ್ಷಗಳ ಹಿಂದೆ ವಾಣಿಶ್ರೀ ಅವರನ್ನು ಗಜೇಂದ್ರ ಎಂಬುವವರು ವಿವಾಹವಾಗಿದ್ದು, ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಕೌಟುಂಬಿಕ ವಿಚಾರವಾಗಿ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.
ಸೋಮವಾರ ಮುಂಜಾನೆ 3:30ರ ಸುಮಾರಿಗೆ ವಾಣಿಶ್ರೀ ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಸ್ಥಳಕ್ಕಾಗಮಿಸಿದ ಸಿಕೆ ಅಚ್ಚುಕಟ್ಟು ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗೊಳಪಡಿಸಿ ತನಿಖೆ ಕೈಗೊಂಡಿದ್ದಾರೆ.
Next Story