ಟೀಮ್ ಇಂಡಿಯಾಕ್ಕೆ ವಾಪಸಾಗಲು ರಾಯುಡು ಸಜ್ಜು
ಹೈದರಾಬಾದ್, ಎ.26: ಈಗ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಅಗ್ರ ಕ್ರಮಾಂಕದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಅಂಬಟಿ ರಾಯುಡು ಭಾರತೀಯ ಕ್ರಿಕೆಟ್ ತಂಡಕ್ಕೆ ವಾಪಸಾಗಲು ಸಜ್ಜಾಗುತ್ತಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕದಿನ ಹಾಗೂ ಟ್ವೆಂಟಿ-20 ಸರಣಿಗೆ ರಾಯುಡು ಆಯ್ಕೆಗಾರರ ಮನಗೆಲ್ಲುವುದು ನಿಶ್ಚಿತವಾಗಿದೆ. ಮಧ್ಯಮ ಕ್ರಮಾಂಕದ ದಾಂಡಿಗರಾದ ಮನೀಶ್ ಪಾಂಡೆ ಹಾಗೂ ಕೇದಾರ್ ಜಾಧವ್ರನ್ನು ಸ್ಪರ್ಧೆಯಲ್ಲಿ ಹಿಂದಿಕ್ಕುವ ವಿಶ್ವಾಸದಲ್ಲಿದ್ದಾರೆ.
‘‘ರಾಯುಡು ಪ್ರದರ್ಶನ ನನಗೆ ಖುಷಿ ತಂದಿದೆ. ರಾಯುಡುಗೆ ಟೀಮ್ ಇಂಡಿಯಾದಲ್ಲಿ ಮತ್ತೆ ಸ್ಥಾನ ನೀಡಬೇಕೆನ್ನುವ ಮಾತನ್ನು ನಾನು ಸಂಪೂರ್ಣ ಒಪ್ಪುವೆ. ಅವರನ್ನು ಸೀಮಿತ ಓವರ್ ಕ್ರಿಕೆಟ್ ತಂಡಕ್ಕೆ ಪರಿಗಣಿಸುವ ಅಗತ್ಯವಿದೆ’’ ಎಂದು ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ಕೆ ಪ್ರಸಾದ್ ಹೇಳಿದ್ದಾರೆ.
Next Story