ಕುಂಞಲಿಮ ಅಡೂರು
ಮಂಗಳೂರು, ಮೇ 14: ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ (ಕೆಯುಐಡಿಎಫ್ಸಿ)ದ ಆಡಳಿತ ನಿರ್ದೇಶಕ ಎ.ಬಿ.ಇಬ್ರಾಹೀಂ ಅವರ ತಾಯಿ, ಕಾಸರಗೋಡು-ಅಡೂರು ನಿವಾಸಿ ಕುಂಞಲಿಮ ಮುಹಮ್ಮದ್ (96) ಸೋಮವಾರ ರಾತ್ರಿ 8:30ರ ಸುಮಾರಿಗೆ ನಿಧನರಾಗಿದ್ದಾರೆ.
ಅನಾರೋಗ್ಯದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಕುಂಞಲಿಮ ಇಂದು ರಾತ್ರಿ ಕೊನೆಯುಸಿರೆಳೆದಿದ್ದಾರೆ. ಮೃತರು ಏಳು ಮಂದಿ ಪುತ್ರರು, ನಾಲ್ವರು ಪುತ್ರಿಯರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಮೃತರ ದಫನ ಕಾರ್ಯವು ಮಂಗಳವಾರ ಅಪರಾಹ್ನ 2 ಗಂಟೆಗೆ ಅಡೂರು ಜುಮಾ ಮಸೀದಿ ವಠಾರದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Next Story