ಬಹುಮತವುಳ್ಳ ಪಕ್ಷಗಳಿಗೆ ಸರಕಾರ ರಚಿಸಲು ಅವಕಾಶ ನೀಡಬೇಕು: ನ್ಯಾ.ಸಂತೋಷ್ ಹೆಗ್ಡೆ
ಬೆಂಗಳೂರು, ಮೇ 16: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಹೊಂದಿರುವ ರಾಜಕೀಯ ಪಕ್ಷ ಅಥವಾ ಪಕ್ಷಗಳ ಗುಂಪಿಗೆ ಮೊದಲು ಸರಕಾರ ರಚಿಸಲು ಅವಕಾಶ ನೀಡಬೇಕು. ಯಾವುದೇ ಕಾರಣಕ್ಕೂ ಗೋವಾ ಮತ್ತು ಮಣಿಪುರದಲ್ಲಿ ನಡೆದಂತೆ ರಾಜ್ಯದಲ್ಲೂ ಆಗಬಾರದು ಎಂದು ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಹೇಳಿದ್ದಾರೆ.
ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ ಕೂಡಲೇ ವಿಧಾನಸಭೆ ಅಧಿವೇಶನ ಕರೆದು ರಾಜಕೀಯ ಪಕ್ಷಗಳಿಗೆ ಬಹುಮತ ಸಾಬೀತುಪಡಿಸಲು ಸೂಚಿಸಬೇಕು. ವಿಳಂಬ ಮಾಡಿದರೆ ಶಾಸಕರ ಕುದುರೆ ವ್ಯಾಪಾರಕ್ಕೆ ಅವಕಾಶ ನೀಡಿದಂತಾಗುತ್ತದೆ. ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಬಂದಿಲ್ಲ. ಆದರೂ ವಾಮ ಮಾರ್ಗದ ಮೂಲಕ ಅಧಿಕಾರ ಹಿಡಿಯಲು ಮುಂದಾಗಿರುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.
Next Story