ಜೂ. 21: ಸಚಿವ ಖಾದರ್ ದ.ಕ. ಜಿಲ್ಲಾ ಪ್ರವಾಸ
ಮಂಗಳೂರು, ಜೂ.19: ರಾಜ್ಯ ನಗರಾಭಿವೃದ್ಧಿ ಮತ್ತು ವಸತಿ ಖಾತೆ ಸಚಿವ ಯು.ಟಿ.ಖಾದರ್ ಜೂ. 20ರಂದು ಬೆಂಗಳೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ರಾತ್ರಿ ಕೊನೆಯ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಲಿದ್ದಾರೆ.
ಜೂ.21ರಂದು ಬೆಳಗ್ಗೆ 6:30ಕ್ಕೆ ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿಶ್ವಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 8 ಗಂಟೆಗೆ ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ದ.ಕ. ಜಿಲ್ಲಾಡಳಿತದ ವತಿಯಿಂದ ನಡೆಯುವ ಅಂತರ್ರಾಷ್ಟ್ರೀಯ ಯೋಗ ದಿನಾಚರಣೆಯ ಉದ್ಘಾಟನೆ, 9:30ಕ್ಕೆ ಕಂಕನಾಡಿ ಫಾದರ್ ಮುಲ್ಲರ್ಸ್ನಲ್ಲಿ ಯೋಗ ದಿನಾಚರಣೆಯಲ್ಲಿ ಭಾಗಿಯಾಗಿಲಿದ್ದಾರೆ.
ಬೆಳಗ್ಗೆ 10:30ಕ್ಕೆ ಮಂಗಳೂರು ಬಿ.ಹೋಬಳಿಯಲ್ಲಿ ಸಮಗ್ರ ಕೃಷಿ ಅಭಿಯಾನದ ಉದ್ಘಾಟನೆ, ಮಧ್ಯಾಹ್ನ 12ಕ್ಕೆ ಬೆಳ್ಮಣ್ ಸಮೀಪದ ನಂದಳಿಕೆ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ನಾಗಶಿಲಾ ಪ್ರತಿಷ್ಠಾಪನೆಯಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಉಚ್ಚಿಲ ಸೋಮೇಶ್ವರ ರೆಹಮಾನಿಯಾ ಜುಮ್ಮಾ ಮಸೀದಿಯ ಶಾಲಾ ಕಟ್ಟಡ ಉದ್ಘಾಟನೆ, ಸಂಜೆ 5 ಗಂಟೆಗೆ ಶಿವಭಾಗ್ ಯೋಗ ಕುಬೇರದಲ್ಲಿ ಯೋಗ ಕಾರ್ಯಕ್ರಮ, 7:30ಕ್ಕೆ ಮಲ್ಲಿಕಟ್ಟೆ ಲಯನ್ಸ್ ಮಂದಿರದಲ್ಲಿ ಲಯನ್ಸ್ ಕ್ಲಬ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದೆ.