ಮಂಗಳೂರು: ವಿಕಾಸ್ ಕಾಲೇಜಿನಲ್ಲಿ ಯೋಗ ದಿನಾಚರಣೆ
ಮಂಗಳೂರು, ಜೂ.20: ನಗರದ ವಿಕಾಸ್ ಕಾಲೇಜಿನಲ್ಲಿ ಬುಧವಾರ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅಂತಾರಾಷ್ಟ್ರೀಯ ಯೋಗ ತೀರ್ಪುಗಾರ ಗೋಪಾಲಕೃಷ್ಣ ದೇಲಂಪಾಡಿ, ಯೋಗ ಮನಸನ್ನು ಅರಳಿಸುತ್ತದೆ. ಪ್ರತಿಯೊಬ್ಬ ವ್ಯಕ್ತಿಯು ಸತತ ಸರಳ ಯೋಗಾಭ್ಯಾಸದಿಂದ ತಮ್ಮನ್ನು ವಿಕಸನಗೊಳಿಸಿಕೊಳ್ಳಬೇಕು ಎಂದರು.
ಉಪನ್ಯಾಸಕ ಲಕ್ಷ್ಮೀಶ್ ಭಟ್ ಯೋಗದ ಮಹತ್ವವನ್ನು ವಿವರಿಸಿದರು. ವಿವಿಧ ಆಸನಗಳನ್ನು ಪ್ರಾತ್ಯಕ್ಷಿಕೆ ಮೂಲಕ ವಿದ್ಯಾರ್ಥಿಗಳು ಯೋಗವನ್ನು ಅಭ್ಯಸಿಸಿದರು.
ಸಂಚಾಲಕ ಡಾ.ಡಿ. ಶ್ರೀಪತಿ ರಾವ್, ವಿಕಾಸ್ ಎಜು ಸೊಲ್ಯುಷನ್ ನಿರ್ದೇಶಕ ಡಾ.ಅನಂತ್ಪ್ರಭು ಜಿ., ಕೌನ್ಸಿಲರ್ ಡಾ.ಮಂಜುಳಾ ರಾವ್ ಉಪಸ್ಥಿತರಿದ್ದರು. ಉಪನ್ಯಾಸಕ ಅಜಿತ್ ರೈ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
Next Story