ಬೆಂಗಳೂರು: ದೊಣ್ಣೆಯಿಂದ ಹೊಡೆದು ಸರಗಳ್ಳತನ
ಬೆಂಗಳೂರು, ಜೂ.23: ಮಹಿಳೆಯೊಬ್ಬರ ತಲೆಗೆ ದೊಣ್ಣೆಯಿಂದ ಹೊಡೆದು ಸರ ಕಳ್ಳತನ ಮಾಡಿರುವ ಘಟನೆ ಇಲ್ಲಿನ ಯಶವಂತಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಮತ್ತಿಕೆರೆಯ ನಿವಾಸಿ ಗೌರಾಂಭಿಕ (33) ಸರ ಕಳೆದುಕೊಂಡ ಮಹಿಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಯಶವಂತಪುರದ ಬಾಂಬೆ ಡೇಯಿಂಗ್ ರಸ್ತೆಯಲ್ಲಿ ಗೌರಾಂಭಿಕ ಹೋಗುವಾಗ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ದೊಣ್ಣೆಯಿಂದ ತಲೆಗೆ ಬಲವಾಗಿ ಹೊಡೆದಿದ್ದಾರೆ. ಬಳಿಕ ಪ್ರಜ್ಞೆ ತಪ್ಪಿಸ್ಥಳದಲ್ಲೇ ಗೌರಾಂಭಿಕ ಕುಸಿದು ಬಿದ್ದಿದ್ದಾರೆ. ಕೂಡಲೇ ಆಕೆಯ ಕೊರಳಿನಲ್ಲಿದ್ದ 100 ಗ್ರಾಂ ಚಿನ್ನದ ಸರ ಕಸಿದು ಕ್ಷಣಾರ್ಧದಲ್ಲಿ ದುಷ್ಕರ್ಮಿಗಳು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಸರಗಳ್ಳತನ ಪ್ರಕರಣ ದಾಖಲಿಸಿಕೊಂಡಿರುವ ಯಶವಂತಪುರ ಪೊಲೀಸರು ಘಟನಾ ನಡೆದ ಸ್ಥಳದಲ್ಲಿ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.
Next Story