ದಾವಣಗೆರೆ: ಎಸಿಬಿ ಅಧಿಕಾರಿಗಳಿಂದ ದಾಳಿ
ಅಕ್ರಮ ಆಸ್ತಿ ಸಂಪಾದನೆ ಆರೋಪ
ದಾವಣಗೆರೆ, ಆ. 21: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆ ಎಫ್ಡಿಎ ಅಧಿಕಾರಿ ಮನೆ ಹಾಗೂ ಡಿಸಿಸಿ ಬ್ಯಾಂಕ್ ಅಸಿಸ್ಟಂಟ್ ಮ್ಯಾನೇಜರ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲಿಸಿದ್ದಾರೆ.
ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆ ಶಿಕಾರಿಪುರದಲ್ಲಿ ಎಫ್ ಡಿಎ ಆಗಿರುವ ಚನ್ನಪ್ಪ ಎಂಬವರ ಮನೆ ಹಾಗೂ ಅಸಿಸ್ಟಂಟ್ ಮ್ಯಾನೇಜರ್ ಭೀಮನಗೌಡರ ಮನೆ ಮೇಲೆ ಅಧಿಕಾರಿಗಳ ತಂಡ ದಾಳಿ ಮಾಡಿದೆ.
ದಾವಣಗೆರೆಯ ಆಝಾದ್ ನಗರದಲ್ಲಿರುವ ಚನ್ನಪ್ಪ ನಿವಾಸ ಮತ್ತು ಎಸ್ ಎಸ್ ಲೇಔಟ್ ನಲ್ಲಿರುವ ಭೀಮನಗೌಡ ಮನೆಗೆ ಎಸಿಬಿ ಎಸ್ಪಿ ವಂಶಿಕೃಷ್ಣ ನೇತೃತ್ವದಲ್ಲಿ ದಾಳಿ ಮಾಡಿದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದರು.
Next Story