ನಾವು ಸಮಾನತೆಯಿಂದ ಬದುಕುತ್ತಿರುವುದಕ್ಕೆ ಸಂವಿಧಾನ ಕಾರಣ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು,ಸೆ.24: ಭಾರತದಲ್ಲಿ ನಾವಿಂದು ಸಮಾನತೆಯಿಂದ ಬದುಕುತ್ತಿರಲು ಡಾ.ಬಿ.ಆರ್.ಅಂಬೇಡ್ಕರ್ ಅವರು ಬಹು ಅಧ್ಯಯನ ಮಾಡಿ ರಚಿಸಿದ ಸಂವಿಧಾನ ಕಾರಣ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಅವರು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಏರ್ಪಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 127 ನೆ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಿಕ್ಷಣ ಸಚಿವ ಎನ್.ಮಹೇಶ್, ವಿಧಾನ ಪರಿಷತ್ ಸದಸ್ಯ ಶ್ರೀ ಉಗ್ರಪ್ಪ, ಹಿರಿಯ ಐಎಎಸ್ ಅಧಿಕಾರಿ ಏಕರೂಪ್ ಕೌರ್ ಮತ್ತಿತರರು ಭಾಗವಹಿಸಿದ್ದರು.
Next Story