ನಟ ದರ್ಶನ್ ಆರೋಗ್ಯ ವಿಚಾರಿಸಿದ ಸಚಿವ ಜಿ.ಟಿ.ದೇವೇಗೌಡ
ಮೈಸೂರು,ಸೆ.25: ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರು ಮಂಗಳವಾರ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಭೇಟಿ ನೀಡಿ ನಟ ದರ್ಶನ್ ಆರೋಗ್ಯ ವಿಚಾರಿಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ದರ್ಶನ್ ಅವರು ಗುಣಮುಖರಾಗುತ್ತಿದ್ದು, ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗುವರು. ನಟರಾದ ದೇವರಾಜ್ ಹಾಗೂ ಪ್ರಜ್ವಲ್ ಅವರು ಚಿಕಿತ್ಸೆ ಪಡೆದು ಈಗಾಗಲೇ ತೆರಳಿದ್ದಾರೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.
Next Story