ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧ ದೂರು
ಬೆಂಗಳೂರು, ಅ.17: ರೌಡಿಶೀಟರ್ಗಳಿಗೆ ಸಿಂಹಸ್ವಪ್ನರಾಗಿರುವ ಕೇಂದ್ರ ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ವಿರುದ್ಧವೇ ವಕೀಲ ಮುರುಳಿಧರ್ ರಾವ್ ಎಂಬವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ದೂರು ನೀಡಿದ್ದಾರೆ.
ಅಲೋಕ್ ಕುಮಾರ್ ಸಾರ್ವಜನಿಕರ ಬಳಿ ಕೆಟ್ಟದಾಗಿ ನಡೆದುಕೊಳ್ಳುತ್ತಿದ್ದಾರೆ. ಇವರನ್ನು ಭೇಟಿ ಮಾಡಲು ಹೋದ ಸಂದರ್ಭದಲ್ಲಿ ಭೇಟಿಗೆ ಅವಕಾಶ ನೀಡದೆ ವಕೀಲರನ್ನು ನಿಂದನೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.
ಜೊತೆಗೆ ಕ್ರಿಮಿನಲ್ ಆರೋಪವೂ ಅಲೋಕ್ ಕುಮಾರ್ ವಿರುದ್ಧ ಇದ್ದು, ಈ ಸಂಬಂಧ ಈ ಕೂಡಲೇ ಅವರನ್ನ ಸ್ಥಾನದಿಂದ ವಜಾಗೊಳಿಸುವಂತೆ ದೂರಿನಲ್ಲಿ ಮುರಳಿಧರ್ ರಾವ್ ದೂರಿನಲ್ಲಿ ಹೇಳಿದ್ದಾರೆ ಎನ್ನಲಾಗಿದೆ.
Next Story