ಸರ್ದಾರ್ ಪಟೇಲ್ ಪ್ರತಿಮೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನ
ಬೆಂಗಳೂರು, ಅ.17: ಸ್ವಾತಂತ್ರ ಹೋರಾಟಗಾರ ಹಾಗೂ ಮಾಜಿ ಗೃಹ ಸಚಿವ ಸರ್ದಾರ್ ವಲ್ಲಭಾಯ್ ಪಟೇಲ್ ಪ್ರತಿಮೆಯ ಉದ್ಘಾಟನೆಗೆ ಕರ್ನಾಟಕದ ಜನಪ್ರತಿನಿಧಿಗಳಿಗೆ ಆಹ್ವಾನ ನೀಡಲಾಗುತ್ತಿದೆ ಎಂದು ಗುಜರಾತ್ ಮಂತ್ರಿ ಸೌರಭ್ ಭಾಯ್ ತಿಳಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಸುಮಾರು 2300 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸರ್ದಾರ್ ವಲ್ಲಭಾಯ್ ಪಟೇಲ್ ಪ್ರತಿಮೆ ಅ.31ರಂದು ಉದ್ಘಾಟನೆ ಆಗಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಜನಪ್ರತಿನಿಧಿಗಳಿಗೆ ಆಹ್ವಾನ ನೀಡಲು ಬಂದಿದ್ದೇವೆಂದು ತಿಳಿಸಿದರು.
ಈ ವೇಳೆ ಬಿಜೆಪಿ ಹಿರಿಯ ಮುಖಂಡರಾದ ರಾಮಚಂದ್ರಗೌಡ, ವಿಧಾನಪರಿಷತ್ ಸದಸ್ಯ ಲೆಹರ್ ಸಿಂಗ್, ನಗರ ಜಿಲ್ಲಾಧ್ಯಕ್ಷ ಮುನಿರಾಜು, ಪಿ.ಎನ್.ಸದಾಶಿವ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.
Next Story