ಅಮೃತಸರದಲ್ಲಿ ರೈಲು ದುರಂತ ; ಮ್ಯಾಜಿಸ್ಟೀರಿಯಲ್ ತನಿಖೆಗೆ ಸಿಎಂ ಆದೇಶ
ಅಮೃತಸರ ಅ.20: ದಸರಾ ಅಂಗವಾಗಿ ಅಮೃತಸರದ ಜೊಡಾ ಫಾಟಕ್ ನಲ್ಲಿ ನಡೆಯುತ್ತಿದ್ದ ರಾವಣ ದಹನ ವೀಕ್ಷಿಸುತ್ತಿದ್ದ ಜನರ ಮೇಲೆ ಶುಕ್ರವಾರ ರೈಲು ಹರಿದು ಮೃತಪಟ್ಟವರ ಸಂಖ್ಯೆ 61ಕ್ಕೆ ಏರಿದ್ದು, 70 ಮಂದಿ ಗಾಯಗೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿ ಮ್ಯಾಜಿಸ್ಟೀರಿಯಲ್ ತನಿಖೆಗೆ ಮುಖ್ಯ ಮಂತ್ರಿ ಅಮರೀಂದರ್ ಸಿಂಗ್ ಆದೇಶ ನೀಡಿದ್ದಾರೆ.
ಪೊಲೀಸ್ ಆಯುಕ್ತರು ತನಿಖೆ ನಡೆಸಿ 4 ವಾರಗಳಲ್ಲಿ ವರದಿ ನೀಡಲಿದ್ದಾರೆ ಎಂದು ಸಿಎಂ ಅಮರೀಂದರ್ ಸಿಂಗ್ ತಿಳಿಸಿದ್ದಾರೆ.
ದುರಂತದಲ್ಲಿ ಮೃತಪಟ್ಟ ಜನರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ. ಗಾಯಗೊಂಡಿರುವವರಿಗೆ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಹೇಳಿದ್ದಾರೆ.
ಸಂತೃಸ್ಥರ ಕುಟುಂಬಕ್ಕೆ ನೆರವಾಗಲು 3 ಕೋಟಿ ರೂ. ಬಿಡುಗಡೆಗೊಳಿಸುವಂತೆ ಅಮೃತಸರದ ಜಿಲ್ಲಾಧಿಕಾರಿಗೆ ಸಿಎಂ ಆದೇಶ ನೀಡಿದ್ದಾರೆ, ದುರಂತದ ಹಿನ್ನೆಲೆಯಲ್ಲಿ 37 ರೈಲುಗಳ ಓಡಾಟವನ್ನು ರದ್ದುಪಡಿಸಲಾಗಿದೆ.
Next Story