ಸಿಆರ್ಝೆಡ್ ವ್ಯಾಪ್ತಿಯ ಮರಳು ದಿಬ್ಬಗಳ ಪಟ್ಟಿ ಪ್ರಕಟ
ಉಡುಪಿ, ಅ.21: ಜಿಲ್ಲೆಯ ಕರಾವಳಿ ನಿಯಂತ್ರಣ ವಲಯ ವ್ಯಾಪ್ತಿಯ ಉಡುಪಿ ಹಾಗೂ ಬ್ರಹ್ಮಾವರ ತಾಲೂಕಿನ ವ್ಯಾಪ್ತಿಯಲ್ಲಿ 2018-19ನೆ ಸಾಲಿ ನಲ್ಲಿ ಗುರುತಿಸಿರುವ ಮರಳು ದಿಬ್ಬಗಳಿಗೆ ಕರ್ನಾಟಕ ರಾಜ್ಯ ಕರಾವಳಿ ವಲಯ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಿಂದ ಅನುಮೋದನೆ ದೊರೆತಿದ್ದು, ಮರಳು ದಿಬ್ಬಗಳು ಹಾಗೂ ಅರ್ಹ ಪರವಾನಿಗೆದಾರರ ಪಟ್ಟಿ ಯನ್ನು ಉಡುಪಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿಯವರ ಕಚೇರಿಯ ನಾಮಫಲಕದಲ್ಲಿ ಪ್ರಕಟಿಸಲಾಗಿದೆ.
ಆಸಕ್ತರು ಕಚೇರಿ ಸಮಯದಲ್ಲಿ ಸಂಪರ್ಕಿಸಿ ಅ.27ರ ಸಂಜೆ 5ಗಂಟೆಯೊಳಗೆ ಸೂಕ್ತ ದಾಖಲೆಯೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 2011ರ ಪೂರ್ವ ದಲ್ಲಿ ಉಡುಪಿ ಹಾಗೂ ಬ್ರಹ್ಮಾವರ ತಾಲೂಕಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಮರಳು ಪರವಾನಿಗೆ ಪಡೆದುಕೊಂಡಿರುವ ಬಗ್ಗೆ ಪರವಾನಿಗೆ ದಾಖಲಾತಿಗಳು ಇದ್ದವರು ಕೂಡ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹಿರಿಯ ಭೂವಿಜ್ಞಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story