ಅನಂತ ಕುಮಾರ್ ಖಾತೆಗಳ ಹೊಣೆ ಸದಾನಂದ ಗೌಡ, ತೋಮರ್ ಹೆಗಲಿಗೆ
ಹೊಸದಿಲ್ಲಿ, ನ. 13: ಸಂಸದೀಯ ವ್ಯವಹಾರಗಳ ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆಯನ್ನು ಗ್ರಾಮೀಣ ಅಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ನೀಡಲಾಗಿದೆ. ಎಚ್.ಎನ್. ಅನಂತ ಕುಮಾರ್ ಅವರು ಬೆಂಗಳೂರಿನಲ್ಲಿ ಸೋಮವಾರ ನಿಧನರಾದ ಹಿನ್ನೆಲೆಯಲ್ಲಿ ಈ ಸ್ಥಾನ ತೆರವಾಗಿತ್ತು. ತೋಮರ್ ಅವರು ಗ್ರಾಮೀಣ ಅಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಗಣಿ ಸಚಿವ. ಅನಂತ ಕುಮಾರ್ ಅವರು ನಿರ್ವಹಿಸುತ್ತಿದ್ದ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವಾಲಯದ ಹೊಣೆಗಾರಿಕೆಯನ್ನು ಸಾಂಕಿಕ ಸಚಿವ ಸದಾನಂದ ಗೌಡ ಅವರಿಗೆ ನೀಡಲಾಗಿದೆ ಎಂದು ರಾಷ್ಟ್ರಪತಿ ಭವನದ ಹೇಳಿಕೆ ತಿಳಿಸಿದೆ. ಪ್ರಧಾನ ಅವರ ಸಲಹೆ ಮೇರೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಈ ಬದಲಾವಣೆ ಮಾಡಿದ್ದಾರೆ.
Next Story