ಬೆಂಗಳೂರು: 2 ಲಕ್ಷ ರೂ. ಮೌಲ್ಯದ ಸರ ಕಳ್ಳತನ
ಬೆಂಗಳೂರು, ನ.13: ಮನೆ ಮುಂದೆ ಕುಳಿತಿದ್ದ ವೃದ್ಧೆಯೊಬ್ಬರ 2 ಲಕ್ಷ ರೂ. ಮೌಲ್ಯದ ಮಾಂಗಲ್ಯಸರವನ್ನು ದುಷ್ಕರ್ಮಿಗಳು ಕಸಿದು ಪರಾರಿಯಾಗಿರುವ ಘಟನೆ ಇಲ್ಲಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.
ಅನ್ನಪೂರ್ಣೇಶ್ವರಿ ನಗರದ ಆರ್ಎಸ್ಸಿಎಸ್ ಲೇಔಟ್ನ ಮನೆಯ ಮುಂಭಾಗ ಮಂಗಳವಾರ ಬೆಳಗ್ಗೆ 8:30ರ ವೇಳೆ ವೀರಮ್ಮ (75) ಎಂಬಾಕೆ ಕುಳಿತಿದ್ದಾಗ, ಬೈಕ್ನಲ್ಲಿ ಬಂದ ದುಷ್ಕರ್ಮಿಯೊರ್ವ ವಿಳಾಸ ಕೇಳುವ ನೆಪಮಾಡಿ ಅವರ ಕತ್ತಿನಲ್ಲಿದ್ದ 80 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಸಿದು ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಪ್ರರಕಣ ಸಂಬಂಧ ದೂರು ದಾಖಲಿಸಿಕೊಂಡಿರುವ ಅನ್ನಪೂರ್ಣೇಶ್ವರಿ ನಗರ ಠಾಣಾ ಪೊಲೀಸರು, ಸಿಸಿಟಿವಿ ಕ್ಯಾಮರಾಗಳಲ್ಲಿನ ದೃಶ್ಯಗಳನ್ನು ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.
Next Story