ಗೌರಿ ಲಂಕೇಶ್ ಹತ್ಯೆ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಎಂಟನೆ ಆರೋಪಿ
ಬೆಂಗಳೂರು, ಡಿ.6: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಎಂಟನೆ ಆರೋಪಿ ಎನ್.ಮೋಹನ್ ನಾಯಕ್ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಅರ್ಜಿ ನ್ಯಾಯಮೂರ್ತಿ ಕೆ.ಸ್.ಮುದಗಲ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಾಗ, ಪ್ರಾಸಿಕ್ಯೂಷನ್ ಪರ ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್ ನಮಿತಾ ಕಲ್ಲೇಶ್ ಮತ್ತು ವಿಚಾರಣಾ ನ್ಯಾಯಾಲಯದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಎಸ್.ಬಾಲನ್ ಇಬ್ಬರೂ ಹಾಜರಾದರು.
ಇದಕ್ಕೆ ನ್ಯಾಯಪೀಠ ಇಬ್ಬರಲ್ಲಿ ಯಾರು ಹಾಜರಾಗುತ್ತೀರಿ ಎಂಬ ಬಗ್ಗೆ ಮೆಮೊ ಸಲ್ಲಿಸಿ ಎಂದು ವಿಚಾರಣೆಯನ್ನು ಡಿ.17ಕ್ಕೆ ಮುಂದೂಡಿತು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ ನಿವಾಸಿಯಾದ ಎನ್.ಮೋಹನ್ ನಾಯಕ್ಗೆ ವಿಚಾರಣಾ ನ್ಯಾಯಾಲಯ ಜಾಮೀನು ನಿರಾಕರಿಸಿದೆ.
Next Story