ಮಂಡ್ಯ: ಮೇವು ಸಮೇತ ಟ್ರ್ಯಾಕ್ಟರ್ ಭಸ್ಮ
ಮಂಡ್ಯ, ಡಿ.12: ಜಮೀನಿನಲ್ಲಿದ್ದ ಮೇವನ್ನು ತೆಗೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಗೆ ವಿದ್ಯುತ್ ತಂತಿ ತಗುಲಿ ಟ್ರ್ಯಾಕ್ಟರ್ ಸಮೇತ ಮೇವು ಸುಟ್ಟು ಭಸ್ಮವಾಗಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಕೊಮ್ಮೇನಹಳ್ಳಿ ಬಳಿ ನಡೆದಿದೆ.
ಭತ್ತದ ಒಕ್ಕಣೆ ಮಾಡಿ ಜಮೀನಿನಲ್ಲಿ ಇರಿಸಿದ್ದ ಮೇವನ್ನು ರೈತ ರಾಜೇಗೌಡ ಮನೆಗೆ ತೆಗೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಮೇವಿಗೆ ವಿದ್ಯುತ್ ತಂತಿ ತಗುಲಿ ಟ್ರ್ಯಾಕ್ಟರ್ ಸಮೇತ ಮೇವು ಭಸ್ಮವಾಗಿದೆ ಎನ್ನಲಾಗಿದೆ.
ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಕೆಳಗೆ ಜೋತುಬಿದ್ದಿರುವ ತಂತಿಗಳನ್ನು ಸರಿಪಡಿಸದ ಕಾರಣ ಈ ದುರ್ಘಟನೆ ಸಂಭವಿಸಿದೆ ಎಂದು ರೈತರು ಸೆಸ್ಕ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆಯಿಂದ ರೈತ ರಾಜೇಗೌಡರಿಗೆ ಸುಮಾರು 3 ಲಕ್ಷ ರೂಪಾಯಿಯಷ್ಟು ನಷ್ಟ ಸಂಭವಿಸಿದ್ದು, ಪರಿಹಾರ ನೀಡಬೇಕು ಹಾಗೂ ಜೋತುಬಿದ್ದಿರುವ ವಿದ್ಯುತ್ ತಂತಿಯನ್ನು ಸರಿಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
Next Story