ಕಾರವಾರ: ಸಮುದ್ರದಲ್ಲಿ ಮುಳುಗಿದ ದೋಣಿ; 8 ಮಂದಿ ಮೃತ್ಯು
ಕಾರವಾರ, ಜ. 21: ಕೂರ್ಮಗಡ ಜಾತ್ರೆಗೆ ತೆರಳಿದ್ದ ದೋಣಿ ಸಮುದ್ರದಲ್ಲಿ ಮುಳುಗಿ 8 ಮಂದಿ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ದೋಣಿಯಲ್ಲಿ ಸುಮಾರು 22 ಮಂದಿ ಇದ್ದರು ಎನ್ನಲಾಗಿದ್ದು, ಅವರು ಕೂರ್ಮಗಡ ಜಾತ್ರೆಗೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಉಳಿದವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಕರಾವಳಿ ಕಾವಲು ಪಡೆ ಮತ್ತು ಸ್ಥಳೀಯ ಮೀನುಗಾರರು ಶೋಧಕಾರ್ಯ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗು ಜಿಲ್ಲಾಧಿಕಾರಿ ನಕುಲ್ ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.