ಹುತಾತ್ಮ ಸೈನಿಕರಿಗೆ ಶ್ರದ್ದಾಂಜಲಿ: ಪಾಕಿಸ್ತಾನ ವಿರುದ್ಧ ಪ್ರತಿಭಟನೆ
ಬೆಂಗಳೂರು, ಫೆ.15: ಉಗ್ರನ ದಾಳಿಗೆ ವೀರ ಮರಣ ಹೊಂದಿದ ಸಿಆರ್ಪಿಎಫ್ ಸೈನಿಕರಿಗೆ ಶ್ರದ್ದಾಂಜಲಿ ಸಲ್ಲಿಸಿ, ಉಗ್ರರನ್ನು ಬೆಂಬಲಿಸುತ್ತಿರುವ ಪಾಕಿಸ್ತಾನ ವಿರುದ್ಧ ಬೆಂಗಳೂರು ನಗರ ಕೇಂದ್ರ ಕಾಂಗ್ರೆಸ್ ಪ್ರಚಾರ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಶುಕ್ರವಾರ ಆನಂದರಾವ್ ವೃತ್ತದ ಬಳಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ, ಕೇಂದ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಜನಾರ್ಧನ್ ಮತ್ತು ಕೆಪಿಸಿಸಿ ವಕ್ತಾರರಾದ ಸಲೀಮ್ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.
ಪಾಕಿಸ್ತಾನ ಬೆಂಬಲಿತ ಉಗ್ರ ಸಂಘಟನೆಯಾದ ಜೈಷ್ ಎ.ಮುಹಮ್ಮದ್ ಉಗ್ರ ಸಂಘಟನೆಯ ದಾಳಿಯನ್ನು ಖಂಡಿಸುತ್ತೇವೆ. ಈ ಘಟನೆಗೆ ವಿಶ್ವದ ಎಲ್ಲ ರಾಷ್ಟ್ರಗಳು ಖಂಡನೆ ವ್ಯಕ್ತಪಡಿಸಿದೆ. ಪಾಕಿಸ್ತಾನ ಭಯೋತ್ಪಾದನೆ ರಾಷ್ಟ್ರ ಎಂದು ಷೋಷಣೆಯಾಗಬೇಕು ಮತ್ತು ರಾಷ್ಟ್ರೀಯ ತನಿಖಾ ದಳದಿಂದ ಸೂಕ್ತ ತನಿಖೆಯಾಗಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. 44 ಮಂದಿ ವೀರ ಮರಣ ಹೊಂದಿದ ಸೈನಿಕರ ಆತ್ಮಕ್ಕೆ ಶಾಂತಿ ಮತ್ತು ಸೈನಿಕರ ಕುಟುಂಬಕ್ಕೆ ಆತ್ಮಸ್ಥೈರ್ಯ ಕೋರಲಾಯಿತು.
Next Story